\v 13 ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ. \v 14 ಆರಿಸಿಕೊಂಡ ಜನರಿಗೆ ವಿಮೋಚನೆಯುಂಟಾಗುತ್ತದೆ ಎಂಬುದಕ್ಕೆ ಪವಿತ್ರಾತ್ಮನ ಮುದ್ರೆಯೇ ಆಧಾರವಾಗಿದೆ. ಮತ್ತು ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಈ ಕಾರಣ ದೇವರಿಗೆ ಮಹಿಮೆಯನ್ನು ಸಲ್ಲಿಸೋಣ. ದೇವಜನರ ಮಹಾಪದವಿಯ ವಿಷಯದಲ್ಲಿ ದೇವರು ಸಭೆಯವರಿಗೆ ಹೆಚ್ಚಾದ ಜ್ಞಾನವನ್ನು ದಯಪಾಲಿಸಬೇಕೆಂದು ಪೌಲನು ಕರಸ್ಥೆ ಪ್ರಾರ್ಥನೆ.